20 June 2025 | Join group

ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ : ಕೋವಿಡ್ ಪ್ರಕರಣ ಹೆಚ್ಚಳ, ಅರೋಗ್ಯ ಸಚಿವ ಗುಂಡೂರಾವ್ ಹೇಳಿಕೆ

  • 24 May 2025 06:17:34 PM

Covid-19 : ದೇಶದ ಕೆಲವು ರಾಜ್ಯಗಳಲ್ಲಿ ದಿನೇ ದಿನೇ ಕೋರೋಣ ಸೋಂಕುಗಳು ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಈಗ ಸೋಂಕುಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ.

 

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸಿರುವ ಅರೋಗ್ಯ ಸಚಿವರು, ರಾಜ್ಯದಲ್ಲಿ ಈಗಾಗಲೇ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ ಎಂದಿದ್ದಾರೆ. ಆದ್ದರಿಂದ ಪ್ರತಿ ಆಸ್ಪತ್ರೆಗಳು ಒಂದು ತಿಂಗಳಾಗುವಷ್ಟು ಟೆಸ್ಟ್ ಕಿಟ್ ತೆಗೆದಿಡಬೇಕೆಂದು ಆದೇಶ ನೀಡಲಾಗಿದೆ.

 

ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆಯಿಂದ ದಾಖಲಾಗಿರುವ ರೋಗಿಗಳಿಂದ ಆಸ್ಪತ್ರೆ ಸಿಬ್ಬಂದಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಬೇಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಿ. ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

 

ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಪಾಲಿಸಿ, ಮುಂಜಾಗ್ರತೆ ವಹಿಸಿದರೆ ಸಾಕು ಎಂದು ತಿಳಿಸಿದ್ದಾರೆ. ಅರೋಗ್ಯ ತಜ್ಞರುಗಳು ಹೇಳುವ ಪ್ರಕಾರ ಇತ್ತೀಚಿನ ದಿನಗಳಲ್ಲಿ ಬರುತ್ತಿರುವ ಕೋರೋಣ ಸೋಂಕು ಹೆಚ್ಚು ಪರಿಣಾಮಕಾರಿಯಾಗದೆ ಇದ್ದರು ಸಹ, ಸರಿಯಾದ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

 

ಕೊವಿಡ್-19 (COVID-19) ರೋಗದ ಹರಡುವಿಕೆಯನ್ನು ತಡೆಗಟ್ಟಲು ಮತ್ತು ತಮಗೂ ಇತರರಿಗೂ ರಕ್ಷಣೆ ನೀಡಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು:

 

ಕೊವಿಡ್-19 ಮುನ್ನೆಚ್ಚರಿಕೆ ಕ್ರಮಗಳು (Precautions):

o ಹೆಚ್ಚು ಬಾರಿ ಕೈ ತೊಳೆಯುವುದು:

ಸಾಬೂನು ಮತ್ತು ನೀರಿನಿಂದ ಕನಿಷ್ಠ 20 ಸೆಕೆಂಡುಗಳ ಕಾಲ ಕೈ ತೊಳೆಯಬೇಕು.

ಸಾಬೂನು ಸಿಗದಿದ್ದರೆ 60% ಅಲ್ಕೊಹಾಲ್ ಇರುವ ಸ್ಯಾನಿಟೈಸರ್ ಬಳಸಿ.

o ಮುಖವಾಡ ಧರಿಸಬೇಕು(Wear Mask):

​​​​ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಅತ್ಯಗತ್ಯ.

ಬಾಯಿ ಮತ್ತು ಮೂಗನ್ನು ಮುಚ್ಚುವ ರೀತಿಯಲ್ಲಿ ಮಾಸ್ಕ್ ಇರಬೇಕು.

o ದೈಹಿಕ ಅಂತರ (Social Distancing):

ಇತರ ವ್ಯಕ್ತಿಗಳಿಂದ ಕನಿಷ್ಠ 6 ಅಡಿ ದೂರವಿರಬೇಕು.

ಗಿರಾಕಿ ಹೆಚ್ಚು ಇರುವ ಸ್ಥಳಗಳಲ್ಲಿ ಹೋಗುವುದು ತಡೆಯಬೇಕು.

o ವೈಯಕ್ತಿಕ ಸ್ವಚ್ಛತೆ ಕಾಪಾಡಿ:

ಹೊರಗಿನಿಂದ ಬಂದ ಕೂಡಲೇ ಬಟ್ಟೆ ಬದಲಿಸಿ, ಸ್ನಾನ ಮಾಡಿ.

ಬಳಕೆ ಆದ ವಸ್ತುಗಳನ್ನು ಸ್ವಚ್ಛವಾಗಿಡಿ.

o ಅಗತ್ಯವಿಲ್ಲದ ಹೊರಹೋಗುವಿಕೆ ತಪ್ಪಿಸಿ:

ಅಗತ್ಯ ಸೇವೆಗಳಿಗಾಗಿ ಮಾತ್ರ ಹೊರ ಹೋಗಿ.

ಮನೆಯಲ್ಲೇ ಉಳಿಯುವುದು ಸುರಕ್ಷಿತ.

o ಉಪಯೋಗಿಸಿ ಟಿಸ್ಯೂ ಅಥವಾ ಕರ್ಚಿಫ್ ಮತ್ತೊಮ್ಮೆ ಉಪಯೋಗಿಸಬೇಡಿ

ಉಪಯೋಗಿಸಿದ ಟಿಸ್ಯೂವನ್ನು ತಕ್ಷಣ ಕಸಪೆಟ್ಟಿಗೆ ಹಾಕಿ, ನಂತರ ಕೈ ತೊಳೆಯಿರಿ

o ಮುಖ, ಮೂಗು, ಕಣ್ಣುಗಳನ್ನು ಸ್ಪರ್ಶಿಸುವುದನ್ನು ತಪ್ಪಿಸಿ:

ವೈರಸ್ ಹಸ್ತಾಂತರವಾಗುವುದು ಸುಲಭವಾಗುತ್ತದೆ.

o ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ:

ಉಸಿರಾಟದಲ್ಲಿ ತೊಂದರೆ, ಜ್ವರ, ಕೆಮ್ಮು ಇದ್ದರೆ ತಕ್ಷಣ ಚಿಕಿತ್ಸೆ ಪಡೆಯಿರಿ.

ಈ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದರಿಂದ ನಾವೆಲ್ಲರೂ ಸುರಕ್ಷಿತವಾಗಿರಲು ಸಾಧ್ಯ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ – ಜವಾಬ್ದಾರಿಯಿಂದ ನಡೆದುಕೊಳ್ಳಿ.