ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿರುವ ನೇತ್ರಾವತಿ ನದಿಯಲ್ಲಿ ಪ್ರಸ್ತುತ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರವಾಹ ಪರಿಸ್ಥಿತಿ ಇದ್ದು, ಜೂನ್ 18, 2025 ರಂದು ನೀರಿನ ಮಟ್ಟ 6.97 ಮೀಟರ್ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿರುವ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಪ್ರಸ್ತುತ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರವಾಹ ಪರಿಸ್ಥಿತಿ ಇದೆ ಎಂದು ಕೇಂದ್ರ ಜಲ ಆಯೋಗದ ಅಧಿಕೃತ ಪ್ರವಾಹ ಮುನ್ಸೂಚನೆ ನಿಗಮ ತನ್ನ ಮಾಧ್ಯಮ ವರದಿಯಲ್ಲಿ ತಿಳಿಸಿದೆ.
ಜೂನ್ 18, 2025 ರಂದು ನೀರಿನ ಮಟ್ಟ 6.97 ಮೀಟರ್ ದಾಖಲಾಗಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಇಂದು ಭಾರಿ ಮಳೆಯಿಂದಾಗಿ ನೇತ್ರಾವತಿ ನದಿಯ ನದಿಯ ನೀರಿನ ಮಟ್ಟ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಈ ಕಾರಣದಿಂದಾಗಿ ನದಿಯು ಅಪಾಯಕಾರಿ ಮಟ್ಟವನ್ನು ತಲುಪಿ ತಗ್ಗು ಪ್ರದೇಶಗಳಿಗೆ ಪ್ರವಾಹ ಬರುವ ಬರುವ ಸಾಧ್ಯತೆ ಇದೆ.
ಅಧಿಕಾರಿಗಳು ಮತ್ತು ನಿವಾಸಿಗಳು ಜಾಗರೂಕರಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.