ಮಂಗಳೂರು: ಸೋಮವಾರ ಸಂಜೆ ಮಂಗಳೂರು ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಖಿಲೇಶ್ ಎಂಬ ಯುವಕನ ಮೇಲೆ ನಾಲ್ಕು ಜನರ ತಂಡವೊಂದು ತಲ್ವಾರ್ನಿಂದ ದಾಳಿ ಮಾಡಿದೆ.
ಬೈಕ್ನಲ್ಲಿ ಬಂದ ತಂಡ ದಾಳಿ ಮಾಡಿದ್ದು ತಲ್ವಾರ್ನಿಂದ ಮೊಣಕೈಗೆ ಗಾಯಗೊಳಿಸಿದೆ. ಗಾಯಾಳು ಅಖಿಲೇಶ್ಗೆ ಮೂಡಬಿದಿರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಒಟ್ಟು ನಾಲ್ಕು ಜನ ದುಷ್ಕರ್ಮಿಗಳು ಘಟನೆ ಬಳಿಕ ಪರಾರಿಯಾಗಲು ಯತ್ನಿಸಿದ್ದಾರೆ. ಮೂವರು ಒಂದೇ ಬೈಕ್ನಲ್ಲಿ ಪರಾರಿಯಾಗಿದ್ದಾರೆ. ಮತ್ತೋರ್ವ ಆರೋಪಿ ಸಿನಾನ್ ಪರಾರಿಯಾಗಲು ಯತ್ನಿಸಿದ್ದಾನೆ. ಸಿಕ್ಕ ಸಿಕ್ಕ ವಾಹನಗಳನ್ನು ಬಲವಂತವಾಗಿ ಅಡ್ಡಹಾಕಿದ್ದಾನೆ. ಆದರೆ ಯಾರು ಕೂಡ ನಿಲ್ಲಿಸಿಲ್ಲ. ಓರ್ವ ಬೈಕ್ ಸವಾರ ಈತನ ಪುಂಡಾಟದಿಂದ ಗಾಬರಿಯಾಗಿ ಬೈಕ್ನಿಂದ ಬಿದ್ದಿದ್ದಾನೆ. ಇನ್ನು ಸಿನಾನ್ನನ್ನು ಸ್ಥಳೀಯರು ಹಿಡಿದು ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.





