ಹರೀಶ್ ಪೂಂಜಾ ವಿರುದ್ಧ ಕೋಮು ದ್ವೇಷದ ಭಾಷಣ ಮಾಡಿದ ಆರೋಪ : ಕೇಸು ದಾಖಲು

  • 05 May 2025 09:42:33 AM

ಉಪ್ಪಿನಂಗಡಿ, ಮೇ 05: ತೆಕ್ಕಾರು ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಗ್ರಾಮದ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮತ್ತು ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

 

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮುಸ್ಲಿಂ ಮುಖಂಡ ಎಸ್ ಎಂ ಎಸ್ ಇಬ್ರಾಹಿಂ ಮುಸ್ಲಿಯಾರ್ ದೂರು ದಾಖಲಿಸಿದ್ದಾರೆ.

 

ಪೊಲೀಸರು ಶಾಸಕರ ಭಾಷಣದ ವೀಡಿಯೊ ದೃಶ್ಯಾವಳಿಗಳನ್ನು ಪರಿಶೀಲಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.