21 June 2025 | Join group

ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಯುವಕನಿಗೆ ಚಾಕು ಇರಿತ : ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು

  • 16 May 2025 11:11:29 PM

ಬಂಟ್ವಾಳ, ಮೇ 16: ಬಂಟ್ವಾಳದ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಆಘಾತಕಾರಿ ಘಟನೆಯೊಂದು ನಡೆದಿದೆ. ನಾಲ್ವರು ವ್ಯಕ್ತಿಗಳ ಗುಂಪೊಂದು ಯುವಕನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದೆ. ಗಾಯಗೊಂಡ ವ್ಯಕ್ತಿಯನ್ನು ಹಮೀದ್ ಯಾನೆ ಅಮ್ಮಿ ಎಂದು ಗುರುತಿಸಲಾಗಿದೆ. ಈತ ಪೈಂಟರ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

 

ಹಮೀದ್ ಕೈಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ನಿವಾಸಿಗಳು ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ದಾಳಿಯ ಉದ್ದೇಶ ಇನ್ನು ಸ್ಪಷ್ಟವಾಗಿಲ್ಲ. ಯಾವುದೋ ವೈಯಕ್ತಿಕ ದ್ವೇಷವೇ ಕಾರಣ ಇರಬಹುದೆಂದು ಮತ್ತು ಇದು ಆಂತರಿಕ ವಿಷಯಕ್ಕೆ ಸಂಬಂಧಪಟ್ಟ ಘಟನೆ ಎಂದು ಊಹಿಸಲಾಗಿದೆ.

 

 

ಸ್ಥಳೀಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಈ ಘಟನೆಯ ಕಾರಣಗಳನ್ನು ತಿಳಿಯಲು ಪ್ರಯತ್ನಪಟ್ಟಿದ್ದಾರೆ. ಇತ್ತೀಚಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಸಹಜ ಸ್ಥಿತಿಗೆ ಮರಳಿದ್ದ ದಕ್ಷಿಣ ಕನ್ನಡದಲ್ಲಿ ಈ ಘಟನೆ ಕಳವಳವನ್ನು ಹುಟ್ಟುಹಾಕಿದೆ.

 

ಬಂಟ್ವಾಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ ಮತ್ತು ಘಟನೆಗೆ ಕಾರಣಗಳೇನು ಎಂಬಹುದನ್ನು ಪತ್ತೆಹಚ್ಚಲು ತೊಡಗಿದ್ದಾರೆ ಎಂದು ವರದಿಯಾಗಿದೆ.