ಮಂಗಳೂರು: ಪಾಕಿಸ್ತಾನದ ಭಯೋತ್ಪಾದಕ ಚಟುವಟಿಗಳಲ್ಲೂ ಜಾಗತಿಕ ಮಟ್ಟದಲ್ಲಿ ಬಹಿರಂಗಪಡಿಸಲು ಭಾರತ ಸನ್ನದ್ಧವಾಗಿದೆ. ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುವ ನಿಟ್ಟಿನಲ್ಲಿ ಏಳು ಸರ್ವಪಕ್ಷ ನಿಯೋಗಗಳ 59 ಸಂಸತ್ ಸದಸ್ಯರ ತಂಡವೊಂದನ್ನು ಕಟ್ಟಲಾಗಿದೆ.
ಈ ಮಹತ್ವದ ರಾಜತಾಂತ್ರಿಕ ಕಾರ್ಯಾಚರಣೆಗೆ ಆಯ್ಕೆಯಾದ ಇಬ್ಬರಲ್ಲಿ ಕರ್ನಾಟಕದ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒಬ್ಬರು ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಇನ್ನೊಬ್ಬರು. ಏಷ್ಯಾ, ಯುರೋಪ್, ಆಫ್ರಿಕಾ ಮತ್ತು ಅಮೆರಿಕಾಗಳನ್ನು ವ್ಯಾಪಿಸಿರುವ 30 ಕ್ಕೂ ಹೆಚ್ಚು ದೇಶಗಳಲ್ಲಿ ಭಯೋತ್ಪಾದನೆಯ ವಿರುದ್ಧ ಭಾರತದ ದೃಢ ನಿಲುವನ್ನು ತಿಳಿಸುವುದು ಈ ನಿಯೋಗಗಳ ಗುರಿಯಾಗಿದೆ.
ಈ ನಿಯೋಗಕ್ಕೆ ನೇಮಕವಾದ ಚೌಟ ರವರು ಬಹಳ ಸಂತಸ ಮತ್ತು ಹೆಮ್ಮೆಯ ವಿಚಾರವೆಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಕಳುಹಿಸಿದ್ದಾರೆ. ಅವರು "ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಸಿಕ್ಕಿರುವ ಈ ಪ್ರಪ್ರಥಮ ಅವಕಾಶವು ನನ್ನ ಪಾಲಿಗೆ ಶ್ರೇಷ್ಠವಾಗಿದೆ... ಹೇಡಿತನದ ಭಯೋತ್ಪಾದಕ ದಾಳಿಗೆ ಆಪರೇಷನ್ ಸಿಂದೂರ್ ಮೂಲಕ ಪ್ರತೀಕಾರ ತೀರಿಸಿಕೊಂಡ ರೀತಿಯ ಬಗ್ಗೆ ಓರ್ವ ಯೋಧನಾಗಿ ನನಗೆ ಅಪಾರ ಹೆಮ್ಮೆಯಿದೆ". ಎಂದು ಬರೆದಿದ್ದಾರೆ.
ಮುಂದಕ್ಕೆ ಬರೆದು "ಈ ಎಲ್ಲದರ ಹಿಂದಿನ ಶಕ್ತಿಯಾಗಿರುವ ನಮ್ಮ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೃಷ್ಟಿಕೋನದ ಮತ್ತು ಧ್ಯೇಯದ ಧ್ವನಿಯಾಗಲು ಈ ನಿಯೋಗದ ಭಾಗವಾಗಿ ಅವಕಾಶ ನೀಡಿದ್ದಕ್ಕಾಗಿ ನಾನು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಧನ್ಯವಾದಗಳನ್ನು ವ್ಯಕ್ತಪಡಿಸಿದ್ದಾರೆ.
"ಭಯೋತ್ಪಾದನೆಯ ವಿರುದ್ಧ ಭಾರತದ ಶೂನ್ಯ-ಸಹಿಷ್ಣು ಸಂದೇಶ ಸಾರಲು ಮತ್ತು ನವಭಾರತವು ಯಾವ ರೀತಿ ಭಿನ್ನವಾಗಿದೆ ಹಾಗೂ ತನ್ನ ನಿಲುವಿಗೆ ಹೇಗೆ ಬದ್ಧವಾಗಿದೆ ಎಂಬುದನ್ನು ಜಗತ್ತಿಗೆ ಹಂಚಿಕೊಳ್ಳಲು ನಾನು ಈ ವೇದಿಕೆಯನ್ನು ಬಳಸಿಕೊಳ್ಳಲಿದ್ದೇನೆ" ಎಂಬ ಭಾವನೆಯನ್ನು ತಿಳಿಸಿದ್ದಾರೆ.
ಮೇ 7 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದರು, ಇದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ವಿರುದ್ಧ 'ಆಪರೇಷನ್ ಸಿಂಧೂರ್' ಮೂಲಕ ಭಾರತದಿಂದ ತ್ವರಿತ ಮಿಲಿಟರಿ ಕ್ರಮಕ್ಕೆ ಕಾರಣವಾಯಿತು.