Red Alert DK,Udupi : ಮೇ 20 ಮತ್ತು 21 ರಂದು ಗುಡುಗು, ಸಿಡಿಲು ಮತ್ತು ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಎರಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮೇ 22 ರಂದು ಗಾಳಿ ಮಳೆಯಾಗಲಿದೆ ಎಂದು ಎಚ್ಚರ ಕೊಟ್ಟಿತ್ತು.
ಇದೀಗ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರಾವಳಿ ಭಾಗದಲ್ಲಿ ಉತ್ತಮ ರೀತಿಯ ಮಳೆಯಾಗಲಿದೆ. ಮೇ 19 ಸೋಮವಾರದನ್ನು ಹಲವೆಡೆ ಬಿರುಸಿನ ಮಳೆಯಾಗಿದ್ದು, ಇನ್ನು ಕೆಲವೆಡೆ ಮೋಡ ಕವಿದ ವಾತಾವರಣವಿತ್ತು.
ದಕ್ಷಿಣ ಕನ್ನಡ ಜಿಲ್ಲಾಡಳಿತ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ನೀರು ನಿಲ್ಲುವ ತಗ್ಗು ಪ್ರದೇಶ, ಕೆರೆ, ಬಾವಿ, ನದಿ, ಸಮುದ್ರ ತೀರಕ್ಕೆ ಮಕ್ಕಳನ್ನು ಹೋಗಲು ಬಿಡಬಾರೆದೆಂದು ಪೋಷಕರಿಗೆ ಮನವಿ ಮಾಡಿದ್ದಾರೆ. ಇದರ ಜೊತೆಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರದಲ್ಲಿ ಇರಬೇಕೆಂದು ಆದೇಶ ಹೊರಡಿಸಿದ್ದಾರೆ.