ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆಸಿದ 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ದೇಶದಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ. ಇದು ಭಾರತದ ಭದ್ರತಾ ಪಡೆಗಳು ಭಾರೀ ಪ್ರಮಾಣದಲ್ಲಿ ಭಯೋತ್ಪಾದಕರ ವಿರುದ್ಧ ನಡೆಸಿದ ಯಶಸ್ವಿ ಕಾರ್ಯಾಚರಣೆಯಾಗಿದೆ. ಈ ಕಾರ್ಯಾಚರಣೆಗೆ ಭಾರತೀಯ ಸೇನೆ ಮತ್ತು ಕೇಂದ್ರ ಸರ್ಕಾರವು ಬಹುಮಟ್ಟಿಗೆ ಮೆಚ್ಚುಗೆ ಗಳಿಸಿವೆ. ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರದಿಂದ ಈ ಕಾರ್ಯಾಚರಣೆ ಯಶಸ್ವಿಯಾಗಿ ನೆರವೇರಿದೆ.
ಇದೀಗ ಉತ್ತರಾಖಂಡ ರಾಜ್ಯದಲ್ಲಿ, ಮದರಸಾಗಳಲ್ಲಿ 'ಆಪರೇಷನ್ ಸಿಂಧೂರ್' ಕುರಿತು ವಿದ್ಯಾರ್ಥಿಗಳಿಗೆ ಪಾಠ ಕಲಿಸುವ ಮಹತ್ವಪೂರ್ಣ ಮತ್ತು ಐತಿಹಾಸಿಕ ನಿರ್ಧಾರವೊಂದನ್ನು ಮದರಸಾ ಮಂಡಳಿಯು ತೆಗೆದುಕೊಂಡಿದೆ. ಉತ್ತರಾಖಂಡದಲ್ಲಿರುವ 450ಕ್ಕೂ ಹೆಚ್ಚು ಮದರಸಾಗಳಲ್ಲಿ ಮುಂದಿನ ದಿನಗಳಲ್ಲಿ ಈ ಕಾರ್ಯಾಚರಣೆಯ ಮಾಹಿತಿ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು.
ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಮುಫ್ತಿ ಶಾಮೂನ್ ಖಾಸ್ಮಿ ಅವರು ಈ ವಿಷಯದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, "ನಾವು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇದ್ದೇವೆ. ಸಂಪೂರ್ಣ ಭಾರತ ನಮ್ಮೊಂದಿಗೆ ನಿಂತಿದೆ. ಇದರಿಂದ ಸ್ಪೂರ್ತಿ ಪಡೆದು ಹೊಸ ಆರಂಭದ ಬಗ್ಗೆ ಯೋಚಿಸುತ್ತಿದ್ದೇವೆ. ಇದರಿಂದಾಗಿ ಮದರಸಾ ವಿದ್ಯಾರ್ಥಿಗಳಿಗೆ 'ಆಪರೇಷನ್ ಸಿಂಧೂರ್' ಕುರಿತು ಶಿಕ್ಷಣ ನೀಡಲು ನಿರ್ಧರಿಸಿದ್ದೇವೆ," ಎಂದು ತಿಳಿಸಿದ್ದಾರೆ.
ಅವರು ಮುಂದಾಗಿ, "ಪಾಕಿಸ್ತಾನ ನಮ್ಮ ಮುಗ್ಧ ನಾಗರಿಕರನ್ನು ಹತ್ಯೆಮಾಡಿದೆ. ಅವರ ಅಧರ್ಮೀಯ ಹಾಗೂ ನೀಚ ಕೃತ್ಯಗಳ ಬಗ್ಗೆ ಮಕ್ಕಳಿಗೆ ತಿಳಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಈ ಶಿಕ್ಷಣವನ್ನು ಎಲ್ಲಾ ಮದರಸಾಗಳಲ್ಲಿ ಖಡ್ಡಾಯವಾಗಿ ಜಾರಿಗೊಳಿಸುತ್ತೇವೆ. ಈ ಬಗ್ಗೆ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಶೀಘ್ರದಲ್ಲೇ ಮನವಿ ಸಲ್ಲಿಸಲಾಗುವುದು," ಎಂದರು.
ಇದೇ ವೇಳೆ, ಸೂಫಿ ಸಂತರ ಬೌದ್ಧಿಕ ನಿಯೋಗವು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ 'ಆಪರೇಷನ್ ಸಿಂಧೂರ್' ಯಶಸ್ಸಿಗೆ ಅಭಿನಂದನೆ ಸಲ್ಲಿಸಿದೆ ಮತ್ತು ಕಾರ್ಯಾಚರಣೆಯ ಕುರಿತಾದ ಅವಲೋಕನ ನಡೆಸಿದೆ.