ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕೊಲೆ ಮಾಡಿ ಸೂಟ್ ಕೇಸ್ ನಲ್ಲಿ ಕೊಲೆ ಮಾಡಿ ಮೃತದೇಹವನ್ನು ತುಂಬಿಸಿಡುವ ಪ್ರಕರಣಗಳು ಅತೀ ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಇದೀಗ ಮತ್ತೊಂದು ಹೃದಯವಿದ್ರಾಹಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಹಳಿ ಬಳಿ ಈ ಮೃತದೇಹ ಪತ್ತೆಯಾಗಿದೆ. ನೀಲಿ ಸೂಟ್ ಕೇಸ್ ವೊಂದರಲ್ಲಿ ರುಂಡ ಮುಂಡ ಕತ್ತರಿಸಿದ ಸ್ಥಿತಿಯಲ್ಲಿ 9 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ರೈಲ್ವೆ ಹಳಿಯ ಸುತ್ತ ಮುತ್ತ ಹರಿದಾಡುವ ಜನ ಈ ಸೂಟ್ ಕೇಸ್ ನೋಡಿ ಸಂಶಯ ವ್ಯಕ್ತಪಡಿಸಿದ್ದು, ರೈಲ್ವೆ ಪೊಲೀಸ್ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ಬಾಲಕಿಯ ಮುಖ ಗುರುತು ಇನ್ನಷ್ಟೇ ಪತ್ತೆಯಾಗಬೇಕಾಗಿದೆ.
ಸ್ಥಳಕ್ಕೆ ಸೂರ್ಯನಗರ ಪೊಲೀಸ್ ಠಾಣೆ ಪೊಲೀಸರು, ಬಯಪ್ಪನಹಳ್ಳಿ ರೈಲ್ವೆ ಸ್ಟೇಷನ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.