ರನ್ಯಾ ರಾವ್ ಅಕ್ರಮ ಚಿನ್ನ ಕಳ್ಳ ಸಾಗಣೆ ಈಗ ಮತ್ತೊಂದು ಮಹತ್ತರ ತಿರುವು ಪಡೆದುಕೊಂಡಿದೆ. ರಾಜ್ಯದ ಗೃಹಮಂತ್ರಿಯವರ ಜೊತೆ ರನ್ಯಾ ರಾವ್ ಸಂಪರ್ಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಗೃಹ ಸಚಿವ ಡಾ. ಜಿ ಪರಮೇಶ್ವರವರ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶಾಲಯ ನಿನ್ನೆ ನಡೆಸಿದ ದಾಳಿ ಕರ್ನಾಟಕ ರಾಜ್ಯದ ರಾಜಕಾರಣದಲ್ಲಿ ಭಾರಿ ದೊಡ್ಡ ಕೋಲಾಹಲ ಎಬ್ಬಿಸಲಿದೆ. ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿ ರಾಜಕೀಯ ಪ್ರೇರಿತ ಎಂದು ಹೇಳುವ ಮೂಲಕ ಡಾ. ಜಿ ಪರಮೇಶ್ವರ ರವರಿಗೆ ಕ್ಲೀನ್ ಚಿಟ್ ನೀಡಿದ್ದರು.
ಆದರೆ ಇಂದು ಬರುವ ಸುದ್ದಿ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ನಟಿ ರನ್ಯಾ ರಾವ್ಗೆ ಪರಮೇಶ್ವರ್ 15 ರಿಂದ 25 ಲಕ್ಷ ರೂ. ನೀಡಿದ್ದಾರಂತೆ. ಇದನ್ನು ಅವರೇ ತಿಳಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಪರಮೇಶ್ವರ್ ರವರು ಪ್ರಭಾವಿ ವ್ಯಕ್ತಿ, ರನ್ಯಾ ರಂತಹ ಹೆಣ್ಣು ಮಕ್ಕಳು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗಲಿ ಎಂಬ ಉಪಮಖ್ಯಮಂತ್ರಿ ಹೇಳಿಕೆ ಭಾರಿ ಸದ್ದು ಮಾಡುತ್ತಿದೆ.
'ಪರಮೇಶ್ವರ್ ಜೊತೆ ಮಾತನಾಡಿದ್ದೇನೆ ರನ್ಯಾಗೆ 25 ಲಕ್ಷ ರೂ. ವರೆಗೆ ನೀಡಿದ್ದಾರಂತೆ. ಕುಟುಂಬದವರಿಗೆಂದು ಆ ಹಣ ಕೊಟ್ಟಿರಬಹುದು. ಪರಮೇಶ್ವರ್ ಮೇಲೆ ಜವಾಬ್ದಾರಿ ಇದೆ, ಅವರು ಗೃಹ ಸಚಿವರು. ನಾನು ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಅವರು ಆರೋಗ್ಯವಾಗಿ ಇದ್ದಾರೆ' ಎಂದು ಶಿವಕುಮಾರ್ ನುಡಿದ್ದಾರೆ.
'ಚಾರಿಟೇಬಲ್ ಟ್ರಸ್ಟ್ಗಳು ಸಾಕಷ್ಟು ನೆರವು ನೀಡುವ ಕೆಲಸ ಮಾಡುತ್ತಿವೆ. ಶಾಲಾ, ಕಾಲೇಜು ಫೀಸ್, ಮದುವೆ ಕಾರ್ಯಗಳಿಗೆ ನೆರವು ನೀಡಲಾಗುತ್ತದೆ. ಈ ರೀತಿಯ ಸಣ್ಣಪುಟ್ಟ ದಾನ ಮಾಡಿರಬಹುದು, ಅದು ಇಲ್ಲ ಅಂತ ಹೇಳುವುದಿಲ್ಲ. ಮದುವೆ, ಆಸ್ಪತ್ರೆ ಬಿಲ್ನಂತಹ ಸಂದರ್ಭದಲ್ಲಿ ನೆರವಾಗಿರಬಹುದು. ಉಳಿದ ವಿಚಾರದ ಬಗ್ಗೆ ಏನು ಮಾಡುತ್ತಾರೋ ನೋಡೋಣ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಶಿವಕುಮಾರ್ ರವರ ಈ ಎಲ್ಲಾ ಹೇಳಿಕೆ ರನ್ಯಾ ರಾವ್ ಗೆ ಗೃಹಸಚಿವ ಡಾ. ಜಿ ಪರಮೇಶ್ವರ ಶಿಕ್ಷಣ ಸಂಸ್ಥೆಯಾದ ಸಿದ್ಧಾರ್ಥ ದಿಂದ ಹಣ ವರ್ಗಾವಣೆಯಾದ ವಿಚಾರವನ್ನು ಸಮರ್ಥನೆ ಮಾಡಿಕೊಂಡಿರುವುದು ರಾಜಕೀಯ ವಲಯದಲ್ಲಿ ಬಹಳಷ್ಟು ಸಂಚಲನಗಳನ್ನು ಮೂಡಿಸುವುದರಲ್ಲಿ ಯಾವುದೇ ಸಂದೇಹವಿಲ್ಲ.