ಭಾರತದ ಕೆಲವು ರಾಜ್ಯಗಳಲ್ಲಿ ಕೋವಿಡ್ -19 ಸೋಂಕು ಹೆಚ್ಚಾಗುತ್ತಿದೆ. ಸದ್ಯಕ್ಕೆ ಸ್ವಲ್ಪ ಮಟ್ಟದ ಏರಿಕೆಯಾದರು ಜಾಗತಿಕವಾಗಿ ಮಟ್ಟದಲ್ಲಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶದ ಕೆಲವು ರಾಜ್ಯಗಳಲ್ಲಿ ಈಗಾಗಲೇ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಆಂಧ್ರಪ್ರದೇಶದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆನ್ನಲ್ಲೇ, ಈಗ ದೆಹಲಿಯಲ್ಲಿ ಕೋರೋಣ ವಿರುದ್ಧ ಹೋರಾಡಲು ಬೇಕಾದ ಸಿದ್ಧತೆಗಳನ್ನು ನಡೆಸುವಂತೆ ಸಲಹೆ ನೀಡಿದೆ. ದೆಹಲಿ ಸರ್ಕಾರದ ಅರೋಗ್ಯ ಇಲಾಖೆ ಶುಕ್ರವಾರ ಎಲ್ಲಾ ಆಸ್ಪತ್ರೆಗಳು ಹಾಸಿಗೆಗಳು, ಆಮ್ಲಜನಕ, ಅಗತ್ಯ ಔಷಧಿಗಳು ಮತ್ತು ಲಸಿಕೆಗಳ ಲಭ್ಯತೆ ಸೇರಿದಂತೆ ಸಂಪೂರ್ಣ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆಯನ್ನು ನೀಡಿದೆ.
ನೆರೆಯ ದೇಶಗಳಾದ ಚೀನಾ, ಥೈಲ್ಯಾಂಡ್ ಮತ್ತು ಸಿಂಗಾಪುರದಲ್ಲಿ ಸೋಂಕುಗಳು ಹೆಚ್ಚಾಗುತ್ತಿರುವುದರಿಂದ ಈ ಸಲಹೆ ಜಾರಿಗೊಳಿಸಲಾಗಿದೆ. "ಆಸ್ಪತ್ರೆಗಳು, ಹಾಸಿಗೆಗಳು, ಆಮ್ಲಜನಕ, ಪ್ರತಿಜೀವಕಗಳು, ಲಸಿಕೆಗಳು ಮತ್ತು ವೆಂಟಿಲೇಟರ್ಗಳು, ಬೈಪಾಪ್ ಯಂತ್ರಗಳು ಮತ್ತು ಪಿಎಸ್ಎ ಸ್ಥಾವರಗಳಂತಹ ಕ್ರಿಯಾತ್ಮಕ ನಿರ್ಣಾಯಕ ಆರೈಕೆ ಉಪಕರಣಗಳ ವಿಷಯದಲ್ಲಿ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳಬೇಕು" ಎಂದು ಅರೋಗ್ಯ ಸಲಹೆಗಾರರು ಆದೇಶ ಹೊರಡಿಸಿದ್ದಾರೆ.
ದೆಹಲಿಯಲ್ಲಿ 23 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಈ ವ್ಯಕ್ತಿಗಳು ನಗರ ನಿವಾಸಿಗಳೇ ಅಥವಾ ಇತ್ತೀಚಿನ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆಯೇ ಎಂದು ಅಧಿಕಾರಿಗಳು ಪ್ರಸ್ತುತ ಪರಿಶೀಲಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ಪಂಕಜ್ ಸಿಂಗ್ ತಿಳಿಸಿದ್ದಾರೆ.
ದೇಶದಾದ್ಯಂತ ಕೋರೋಣ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಕೇರಳದಲ್ಲಿ ಅತೀ ಹೆಚ್ಚಿನ ಪ್ರಕರಣ ಕಂಡುಬಂದಿದ್ದು, ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಭಾರತದ ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಕೋರೋಣ ಸೋಂಕು ಪ್ರಕರಣ ಪತ್ತೆಯಾಗಿದೆ.