21 June 2025 | Join group

ಕೋವಿಡ್ ಹೆಚ್ಚಳ - ಸಿಎಂ ನೀಡಿದ ಸೂಚನೆಗಳೇನು? ಗರ್ಭಿಣಿ, ಮಕ್ಕಳು ಮತ್ತು ವಿಮಾನ ಪ್ರಯಾಣಿಕರಿಗೆ ವಿಶೇಷ ಸೂಚನೆ

  • 27 May 2025 12:08:54 PM

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ದಿನೆದಿಂದೆ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಿನ್ನೆ ರಾಜ್ಯದ ಮುಖ್ಯಮಂತ್ರಿ, ಸಚಿವರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಕೆಲವು ಮಹತ್ವಪೂರ್ಣ ಎಚ್ಚರಿಕೆ ಕ್ರಮಗಳನ್ನು ಪಾಲಿಸಲು ಆಸ್ಪತ್ರೆಗಳಿಗೆ ಕರೆ ನೀಡಿದ್ದಾರೆ.

 

ಗರ್ಭಿಣಿಯರಿಗೆ ವ್ಯವಸ್ಥೆ

ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ. ಆಯಾ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಿಕೊಂಡಿರಬೇಕು. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಸೇರಿದಂತೆ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲು ತಿಳಿಸಲಾಗಿದೆ.

 

ವಿಮಾನ ನಿಲ್ದಾಣದಲ್ಲಿ ತಪಾಸಣೆ

ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಬೇರೆ ರಾಜ್ಯ ಅಥವಾ ಹೊರದೇಶಗಳಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದ ಒಳಗೆ ತಪಾಸಣಾ ಕೇಂದ್ರಗಳನ್ನು ನಿರ್ಮಿಸಲಾಗುವುದು.

 

ಶೀತ ನೆಗಡಿ ಇದ್ದರೆ ಮಕ್ಕಳಿಗೆ ರಜೆ

ಶೀತ ನೆಗಡಿ ಇರುವ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಶೀತ ನೆಗಡಿ ಇರುವ ಮಕ್ಕಳಿಗೆ ರಜೆ ನೀಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋವಿಡ್ ತುರ್ತು ಸಭೆಯ ಬಳಿಕ ಮಾತನಾಡಿದ ಸಿಎಂ ಶೀತ ನೆಗಡಿ ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು, ಶಾಲೆಗಳು ಈ ಬಗ್ಗೆ ಗಮನಹರಿಸಿ, ಶೀತ ನೆಗಡಿರುವ ಮಕ್ಕಳನ್ನು ವಾಪಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು ಇಂತಹ ಮಕ್ಕಳಿಗೆ ರಜೆ ನೀಡಬೇಕು ಎಂದು ಸಿಎಂ ಸೂಚಿಸಿದ್ದಾರೆ.

ಕೊರೋನಾ ರೋಗಕ್ಕೆ ಬೆಂಗಳೂರಿನಲ್ಲಿ 84 ವರ್ಷದ ವೃದ್ಧನ ಮೊದಲ ಬಲಿ: ಗರ್ಭಿಣಿ ಸ್ಥಿತಿ ಗಂಭೀರ, ಜನರಲ್ಲಿ ಆತಂಕ.!

ಸದ್ಯಕ್ಕೆ ಆತಂಕ ಪಡೆ ಪಡುವ ಅಗತ್ಯವಿಲ್ಲ ಆದರೆ ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತುಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. ವಯಸ್ಸಾದವರು ಗರ್ಭಿಣಿಯರು ಹೃದಯ ಸಂಬಂಧಿ ಶ್ವಾಸಕೋಶ ಸಮಸ್ಯೆ ಇರುವವರು ಮುನ್ನಚ್ಚರಿಕೆ ಕ್ರಮವಾಗಿ ಮಾಸ್ಕ ದೊರೆಯುವುದು ಒಳ್ಳೆಯದು, ಈ ಬಗ್ಗೆ ಅರಿವು ಮೂಡಿಸಬೇಕು. ಅಗತ್ಯವಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು ಎಂದು ಸೂಚಿಸಿದ್ದಾರೆ.