ಕರ್ನಾಟಕ ಕರಾವಳಿಯಲ್ಲಿ ನಡೆಯುತ್ತಿರುವ ಕೋಮು ಸಂಘರ್ಷ ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ. ಆಡಳಿತ ಪಕ್ಷ ಬಿಜೆಪಿಯನ್ನು ಆರೋಪ ಸ್ಥಾನದಲ್ಲಿಟ್ಟರೆ, ವಿರೋಧ ಪಕ್ಷ ಬಿಜೆಪಿ ಕಾಂಗ್ರೆಸ್ ತುಷ್ಟೀಕರಣವೇ ಈ ಎಲ್ಲಾ ಕೋಮು ಸಂಘರ್ಷಕ್ಕೆ ಕಾರಣ ಎಂದು ಆರೋಪಿಸುತ್ತಿದೆ. ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಕರಾವಳಿ ಭಾಗದಲ್ಲಿ ನಡೆಯುವ ಕೋಮು ಗಲಭೆಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಬಿಜೆಪಿಯ ಕೋಮು ಪ್ರಚೋದನೆ ಕಾರಣ
ಇಂದು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅರಮನೆ ಮೈದಾನದ ಬಳಿ ಪತ್ರಕಾರರ ಜೊತೆ ಮಾತನಾಡಿ " ಬಿಜೆಪಿ ಮತ್ತು ಅನೇಕ ಸಂಘಟನೆಗಳು ಕರಾವಳಿ ಭಾಗದಲ್ಲಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ ಆದರೆ ಇದರಿಂದ ಕರಾವಳಿಗೆ ಮಾತ್ರವಲ್ಲದೆ ಇಡೀ ಕರ್ನಾಟಕಕ್ಕೆ ನಷ್ಟ ಎಂಬುವುದನ್ನು ಅವರು ಅರಿತುಕೊಳ್ಳಬೇಕು" ಎಂದು ಹೇಳಿದ್ದಾರೆ.
"ಈಗಾಗಲೇ ಸರಕಾರದ ವತಿಯಿಂದ ಒಂದು ತಂಡವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಕಳುಹಿಸಿದ್ದೇನೆ. ಅಧಿಕಾರಿಗಳು ನೀಡುವ ವರದಿ ಮತ್ತು ಸಾರ್ವಜನಿಕರ ವರದಿ ಬೇರೆಯೇ ಆಗಿರುವದರಿಂದ ಸಾರ್ವಜನಿಕರಲ್ಲಿ ಚರ್ಚೆ ನಡೆಸಿ ವರದಿ ನೀಡಲು ತಿಳಿಸಿದ್ದೇನೆ" ಎಂದರು. ಕರಾವಳಿಯಲ್ಲಿ ಪರಿಸ್ಥಿತಿ ನಿಯಂತ್ರಿಸಬೇಕು, ಇದಕ್ಕಾಗಿ ನಾವು ಪ್ರಯತ್ನಿಸುತ್ತೇವೆ ಎಂದು ನುಡಿದರು.
ಈ ಗಲಭೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ನಷ್ಟ, ಇದು ಇಡೀ ಕರಾವಳಿ ಭಾಗಕ್ಕೆ ಬಿದ್ದಿರುವ ಕೊಡಲಿ ಪೆಟ್ಟು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೂಡಿಕೆ ಮಾಡುವವರು ಹಿಂಜರಿಯುತ್ತಿದ್ದಾರೆ, ಯುವಕರು ಬೇರೆ ದೇಶಕ್ಕೆ ಉದ್ಯೋಗಕ್ಕೆ ಬೇರೆ ದೇಶಕ್ಕೆ ಹೋಗೋದು, ಈ ಎಲ್ಲಾ ವಸ್ತುಸ್ಥಿತಿ ಅರಿತುಕೊಳ್ಳಬೇಕು ಎಂದು ಬಿಜೆಪಿ ಮತ್ತು ಇತರ ಸಂಘಟನೆಗಳಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನ ತುಷ್ಟೀಕರಣ ನೀತಿಯೇ ಕಾರಣ
ಬಿಜೆಪಿ ಹೇಳುವ ಪ್ರಕಾರ, ಕಾಂಗ್ರೆಸ್ ಪಕ್ಷ ಮಾಡುವ ಮುಸ್ಲಿಂ ತುಷ್ಟೀಕರಣವೇ ಕರಾವಳಿಯಲ್ಲಿ ಕೋಮು ಗಲಾಟೆಗೆ ಕಾರಣ, ಬಿಜೆಪಿ ಪಕ್ಷ ಆಳ್ವಿಕೆಯಲ್ಲಿರುವಾಗ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ ಆದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಂತೆ ಮುಸ್ಲಿಂ ತುಷ್ಟೀಕರಣ ನೀತಿ ಅನುಸರಿಸುವುದರಿಂದ ಈ ರೀತಿಯ ಕೋಮು ಗಲಭೆಗಳು ನಡೆಯುತ್ತದೆ ಎಂದು ಅಭಿಪ್ರಾಯಪಟ್ಟಿದೆ.