ಉಡುಪಿ : ಜಿಲ್ಲೆಯ ಕಾಪು ತಾಲೂಕಿನ 65 ವರ್ಷ ಪ್ರಾಯದ ಕೋವಿಡ್ -19 ಸೋಂಕಿತ ವ್ಯಕ್ತಿಯೊಬ್ಬರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರುವ ಸುದ್ದಿ ವರದಿಯಾಗಿದೆ.
ಮೃತರು ಹೊಟ್ಟೆಯ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಮೇ 29 ರಂದು ಅಧಿಕ ರಕ್ತದೊತ್ತಡದ ಕಾರಣ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ದಾಖಲಾದ ಕೆಲವೇ ಮರುದಿನವೇ ಅವರ ಕೋವಿಡ್ -19 ಪರೀಕ್ಷೆಯಲ್ಲಿ ಪಾಸಿಟಿವ್ ಎಂಬ ರಿಪೋರ್ಟ್ ಬಂದಿತ್ತು. ಜೂನ್ 2 ರಂದು ಮಧ್ಯಾಹ್ನ ಪರಿಸ್ಥಿತಿ ಹದಗೆಟ್ಟು ಸಾವನ್ನಪ್ಪಿದ್ದಾರೆ.
ಕರ್ನಾಟಕ ರಾಜ್ಯದಾದ್ಯಂತ ಒಟ್ಟು 311 ಕೊರೊನ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈಗಾಗಲೇ 5 ವ್ಯಕ್ತಿಗಳು ಸಾವನ್ನಪ್ಪಿದ್ದಾರೆ.