ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ನಡೆದ ಘೋರ ದುರಂತಕ್ಕೆ ರಾಜ್ಯ ಸರಕಾರದ ಬೇಜವಾಬ್ದಾರಿತನವೇ ಕಾರಣ ಎಂದು ಬಿಜೆಪಿ ಆರೋಪಿಸಿದೆ. ಬೆಂಗಳೂರು ತಂಡ ಈ ವರ್ಷದ ಐಪಿಎಲ್ ಚಾಂಪಿಯನ್ ನ ಸಂಭ್ರಮೋತ್ಸವದಲ್ಲಿ ಇಂದು ಕಾಲ್ತುಳಿತಕ್ಕೆ 10 ಕ್ಕಿಂತ ಹೆಚ್ಚು ಜನರು ಮರಣಪಟ್ಟಿದ್ದಾರೆ. ಹಲವಾರು ಜನ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ನಿಖರವಾದ ಸಾವಿನ ಸಂಖ್ಯೆ ತನಿಖೆಯ ನಂತರ ತಿಳಿಯಲಿದೆ. ಸರಕಾರ ಸರಿಯಾದ ರೀತಿಯಲ್ಲಿ ವ್ಯವಸ್ಥೆ ಮಾಡದ ಕಾರಣ ಈ ರೀತಿಯ ದುರ್ಘಟನೆಗೆ ಕಾರಣವಾಗಿದೆ.
ರಾಜ್ಯ ಬಿಜೆಪಿ, ಆಡಳಿತರೂಢ ಕಾಂಗ್ರೆಸ್ ಸರಕಾರದ ಮೇಲೆ ಆರೋಪ ಹೊರಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಈ ಘೋರ ಘಟನೆಗೆ ನೇರ ಹೊಣೆ ಎಂದು ಆರೋಪಿಸಿದೆ.
'ಸಂಭ್ರಮದ ಮನೆಯಲ್ಲಿ ಸೂತಕ ಉಂಟಾಗಲು ನೇರ ಕಾರಣ ಸಿಎಂ, ಈ ಕೊಲೆಗಡುಕ ಸರ್ಕಾರದ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಬೇಕು' ಎಂದು ಎಕ್ಸ್ ನಲ್ಲಿ ತಿಳಿಸಿದೆ.