ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗದ ಬಳಿ ಜೂನ್ 4 ರಂದು ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮೂರು ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ), ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಮತ್ತು ಕಾರ್ಯಕ್ರಮ ಆಯೋಜಕರಾದ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ಸಂಸ್ಥೆಯ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಈ ಮೂರೂ ಸಂಸ್ಥೆಗಳಿಗೆ ತುಂಬಾ ಗಂಭೀರ ಸ್ವರೂಪದ ಪ್ರಕರಣಗಳಾದ ಮಾನವ ಹತ್ಯೆ ಮತ್ತು ಕಾನೂನುಬಾಹಿರ ಸಭೆಯ ವ್ಯವಸ್ಥೆ ಮಾಡಿದ ಆರೋಪದಲ್ಲಿ ಕೇಸು ದಾಖಲಾಗಿದೆ. ಆರ್ಸಿಬಿಯನ್ನು ಆರೋಪಿ ನಂ. 1, ಡಿಎನ್ಎ ಎಂಟರ್ಟೈನ್ಮೆಂಟ್ ಅನ್ನು ಆರೋಪಿ ನಂ. 2 ಮತ್ತು ಕೆಎಸ್ಸಿಎಯನ್ನು ಆರೋಪಿ ನಂ. 3 ಎಂದು ಹೆಸರಿಸಲಾಗಿದೆ.
ರಾಜ್ಯ ಸರ್ಕಾರಕ್ಕೆ ಕೂಡ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದ್ದು, ವಿವರವಾದ ಸ್ಥಿತಿ ವರದಿಗಳಿಗಾಗಿ ಕಾಯುತ್ತಿದೆ ಎನ್ನಲಾಗಿದೆ. ಜೂನ್ 11 ರಿಂದ 13 ರವರೆಗೆ ಎಲ್ಲಾ ಪಕ್ಷಗಳಿಂದ ಮತ್ತು ಸಾರ್ವಜನಿಕ ಹೇಳಿಕೆಗಳನ್ನು ದಾಖಲಿಸಿ ವಿಚಾರಣೆಗಳನ್ನು ನಡೆಸಲಿದ್ದಾರೆ.