20 June 2025 | Join group

ಗುಂಡ್ಯದಲ್ಲಿ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ - ಹಲವರಿಗೆ ಗಾಯ

  • 07 Jun 2025 11:45:12 AM

ಗುಂಡ್ಯ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಹಲವಾರು ಗಾಯಗೊಂಡಿದ್ದಾರೆ. ಜೂನ್ 07 ರಂದು ನುಸುಕಿನ ಜಾವ ಈ ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ.

 

ಇಂದು ಜೂನ್ 07 ರ ಬೆಳಗ್ಗಿನ ಜಾವ 3.30 ರ ಸಮಯ ಬೆಂಗಳೂರಿನಿಂದ ಪುತ್ತೂರು ಕಡೆ ವೇಗವಾಗಿ ಬರುತ್ತಿದ್ದ ಬಸ್, ತಿರುವುನಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಗಾಢ ನಿದ್ರೆಯಲ್ಲಿದ್ದ ಪ್ರಯಾಣಿಕರು ಒಮ್ಮೆಲೇ ಭಯಭೀತಗೊಂಡರು.

ಇದನ್ನೂ ಓದಿಕಾರಿಂಜ ದೇವಸ್ಥಾನದ ಕೆರೆಗೆ ಬಿದ್ದು ವಿದ್ಯಾರ್ಥಿ ಸಾವು - ಕಾಲುಜಾರಿ ನಡೆದ ಅವಘಡ

ಈ ಘಟನೆಯಲ್ಲಿ ಹನ್ನೆರಡು ಜನರಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಚಾಲಕ ಸೇರಿ ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಅತಿಯಾದ ವೇಗದ ಚಾಲನೆಯೇ ಈ ಘಟನೆಗೆ ಮೂಲ ಕಾರಣ ಎನ್ನಲಾಗಿದೆ.

 

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿಸ್ಥೆ ನೀಡಲಾಗುತ್ತಿದೆ. ಹಬ್ಬದ ಪ್ರಯುಕ್ತ ಬಸ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ.