ಬಂಟ್ವಾಳ: ಪಾಣೆಮಂಗಳೂರಿನ ಹಳೆ ಸೇತುವೆಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲು ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ. ಭಟ್ ಆದೇಶ ಹೊರಡಿಸಿದ್ದಾರೆ.
ಸರಿಸುಮಾರು ನೂರು ವರುಷಗಳಷ್ಟು ಹಳೆಯದಾದ ಪಾಣೆಮಂಗಳೂರು ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈಗಾಗಲೇ ಸೇತುವೆಯ ಸಾಮರ್ಥ್ಯವನ್ನು ಪರಿಶೀಲನೆ ಮಾಡಲು ಆದೇಶ ಮಾಡಿದ್ದು, ವರದಿ ಬಂದ ನಂತರ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಬಂಟ್ವಾಳ ಪುರಸಭೆಯ ಮುಖ್ಯಧಿಕಾರಿಗಳಿಗೆ ಆದೇಶ ಮಾಡಲಾಗಿದೆ ಎಂದು ತಿಳಿದುಬಂದಿದೆ.