ಬಂಟ್ವಾಳ : ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ದೈಹಿಕ ಕಿರುಕುಳ ನೀಡಿದ ಅಬೂಬಕರ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿದ್ದಾರೆ.
ಈ ಬಗ್ಗೆ ಸಂತ್ರಸ್ತ ಮಹಿಳೆ ಬಂಟ್ವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅಬೂಬಕರ್ ಮಹಿಳೆಯ ಜೊತೆ ಅಸಭ್ಯ ವರ್ತಿಸಿದ್ದಲ್ಲದೆ, ದೈಹಿಕ ಕಿರುಕುಳ ಕೂಡ ನೀಡಿದ್ದಾನೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಂತ್ರಸ್ತ ಮಹಿಳೆ ಪತಿ ಜೊತೆ ಉಜಿರೆಯಿಂದ ಮಂಗಳೂರು ಕಡೆ ಪ್ರಯಾಣಿಸುತ್ತಿರುವಾಗ ಬಂಟ್ವಾಳ ಬೈಪಾಸ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಬಂಟ್ವಾಳ ಪೊಲೀಸರು ಕಿರಾತಕನನ್ನು ಬಂಧಿಸಿ, ಕೋರ್ಟಿಗೆ ಹಾಜರುಪಡಿಸಿದ್ದಾರೆ.