ಮಂಗಳೂರು: ದಕ್ಷಿಣ ಕನ್ನಡದಲ್ಲಿ ಇತೀಚೆಗೆ ನಡೆದ ಕೋಮು ಕೃತ್ಯಗಳನ್ನು ಪರಿಗಣನೆಗೆ ತೆಗೆದುಕೊಂಡು ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಕೋಮು ಸಂಘರ್ಷವನ್ನು ಹತ್ತಿಕ್ಕಲು ಕೋಮು ನಿಗ್ರಹ ಪಡೆ ತಯಾರಿಸಲಾಗಿದೆ.
ಇಂದು ಮಂಗಳೂರಿನಲ್ಲಿ ಇದರ ಕೇಂದ್ರ ಕಚೇರಿ ಉದ್ಘಾಟಿಸಲಾಯಿತು. ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ ಜಿ ಪರಮೇಶ್ವರ್ ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ನೂತನವಾಗಿ ಪ್ರಾರಂಭಿಸಿರುವ ವಿಶೇಷ ಕಾರ್ಯಪಡೆ Special Action Force (SAF) ಪಡೆಯು ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಲಿದೆ.
ಈ ಸಂದರ್ಭದಲ್ಲಿ ಅರೋಗ್ಯ ಮತ್ತು ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು. ಟಿ ಖಾದರ್, ಕರ್ನಾಟಕ ಡಿಜಿ, ಎಂ.ಎ ಸಲೀಮ್, ಐಜಿಪಿ ಪಶ್ಚಿಮ ಶ್ರೇಣಿಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಎಸ್ಪಿ ಅರುಣ್ ಕುಮಾರ್, ಐವನ್ ಡಿಸೋಜಾ, ವಿನಯಕುಮಾರ್ ಸೊರಕೆ, ಅಶೋಕ್ ರೈ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.