ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ ಸುರಿಯುತ್ತಿರುವ ಭಾರಿ ಧಾರಾಕಾರ ಮಳೆಯಿಂದ ಆಗುಂಬೆ ಘಾಟಿ ಪ್ರದೇಶಗಳಲ್ಲಿ ಸಂಚಾರ ಮಾಡುವಾಗ ಬಹಳಷ್ಟು ಎಚ್ಚರಿಕೆ ತೆಗೆದುಕೊಳ್ಳಬೇಕಾಗಿದೆ.
ಭಾರಿ ಮಳೆಯ ಹಿನ್ನಲೆಯಲ್ಲಿ 169-ಎ ಹೆದ್ದಾರಿ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ದೊಡ್ಡ ವಾಹನಗಳ ಸಂಚಾರಕ್ಕೆ ನಿಷೇದ ಹೇರಲಾಗಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಭಾರೀ ವಾಹನಗಳ ಓಡಾಟಕ್ಕೆ ನಿಷೇದ ಹೇರಿದ್ದಾರೆ. ಮಲ್ಪೆ - ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದ ಭೂ ಕುಸಿತ ಕೂಡ ಆಗಿದೆ ಎಂದು ತಿಳಿದುಬಂದಿದೆ.
ಈ ಕಾರಣದಿಂದಾಗಿ ದೊಡ್ಡ ವಾಹನಗಳ ಸಂಚಾರ ನಿಷೇದಿಸಿದ್ದು, ಚಿಕ್ಕ ವಾಹನ ಸವಾರರು ಕೂಡ ಬಹಳ ಜಾಗರೂಕರಾಗಿರಬೇಕೆಂದು ಮನವಿ ಮಾಡಲಾಗುವುದು. ಘಾಟಿ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾದಾಗ ಭೂ ಕುಸಿತ ಆಗುವುದರಿಂದ, ಸಾಧ್ಯವಾದಷ್ಟು ಇಂತಹ ಪ್ರದೇಶಗಳಲ್ಲಿ ವಾಹನ ಸಂಚಾರ ಮಾಡದೇ ಇರುವುದು ಉತ್ತಮ.