19 June 2025 | Join group

ಸದನದಲ್ಲಿ ಆರ್‌ಎಸ್‌ಎಸ್ ಮತ್ತು ಭಜರಂಗ ದಳದ ವಿರುದ್ಧ ಹೇಳಿಕೆ : ಸಿಎಂ ಸಿದ್ದರಾಮಯ್ಯರಿಗೆ ನೋಟೀಸ್

  • 19 Jun 2025 12:42:47 AM

ಬೆಂಗಳೂರು: ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಮತ್ತು ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ನೀಡಿದ್ದ ಹೇಳಿಕೆ, ಬಹಳ ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಶಾಸಕರು ಸಿಎಂ ಹೇಳಿಕೆ ಖಂಡಿಸಿ ವಾಗ್ದಾಳಿ ನಡೆಸಿದ್ದರು.

 

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಸಿದ್ದರಾಮಯ್ಯರವರಿಗೆ ನೋಟೀಸ್ ಜಾರಿ ಮಾಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

 

ಜನರ ಭಾವನೆಗೆ ದಕ್ಕೆ ಬರುವಂತಹ ಹೇಳಿಕೆಗಳನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ ಎಂಬ ಆರೋಪದಡಿ ಕಿರಣ್ ಎಂಬವರು ಕೋರ್ಟಿನಲ್ಲಿ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಿಎನ್ಎಸ್ಎಸ್ ಸೆಕ್ಷನ್ 223ರ ಅಡಿಯಲ್ಲಿ ಸಿದ್ದರಾಮಯ್ಯರವರಿಗೆ ಕೋರ್ಟು ನೋಟೀಸ್ ನೀಡಿದೆ ಮತ್ತು ಜೂನ್ 26ರ ಒಳಗೆ ಉತ್ತರಿಸುವಂತೆ ಆದೇಶಿಸಿದೆ.