20 June 2025 | Join group

ದ.ಕ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘಗಳಿಂದ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ

  • 21 Mar 2025 06:35:04 PM

ಕರ್ನಾಟಕ ಬಂದ್ : ಕನ್ನಡ ಪರ ಸಂಘಟನೆಗಳು ಕರ್ನಾಟಕ ಮಾರ್ಚ್ 22 ರಂದು ರಾಜ್ಯ ಬಂದ್ ಗೆ ನೀಡಿರುವ ಕರೆಗೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ತಿರಸ್ಕರಿಸಿದೆ. ಬೆಳಗಾವಿಯಲ್ಲಿ ಮರಾಠಿಗರ ಉಪಟಳಿಕೆಯನ್ನು ಖಂಡಿಸಿ ಮತ್ತು ಇನ್ನಿತರರ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಕೆಲ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿತ್ತು.

 

ದಕ್ಷಿಣ ಕನ್ನಡ ಬಸ್ ಮಾಲಕರು ಅನುಭವಿಸುವ ಕಷ್ಟ ಮತ್ತು ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ಶನಿವಾರ ಬಸ್ ಬಂದ್ ಮಾಡೋದಿಲ್ಲ ಎಂದು, ಸಾಮಾನ್ಯ ಇತರ ದಿನಗಳಂತೆ ಬಸ್ ಗಳು ಓಡಾಡಲಿದೆ ಮತ್ತು ಸಾರ್ವಜನಿಕರ ಹಿತ ದೃಷ್ಟಿಯಿಂದ ನಮ್ಮ ಬೆಂಬಲ ಈ ಬಂದ್ ಗೆ ಬೆಂಬಲ ಕೊಡಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ತಿಳಿಸಿದೆ. 

 

ಹತ್ತನೇ ತರಗತಿಯ ಪರೀಕ್ಷೆ ನಡೆಯುವುದರಿಂದ ಬಸ್ ಬಂದ್ ಮಾಡಲು ಸಾಧ್ಯವಿಲ್ಲ ಎಂದು ದ.ಕ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಜ್ ಪರ್ತಿಪಾಡಿ ತಿಳಿಸಿದ್ದಾರೆ. ಬಸ್ ಬಂದ್ ಗೆ ಯಾವುದೇ ಸಂಘಟನೆಗಳು ನಮ್ಮನ್ನು ಕೇಳಿಕೊಂಡಿಲ್ಲ ಮತ್ತು ಸಾರ್ವಜನಿಕರಿಗೆ ಸಮಸ್ಯೆಯಾಗುವ ಕಾರಣದಿಂದ ಬಂದ್ ಮಾಡುವುದಿಲ್ಲ ಎಂದು ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ರಾಜವರ್ಮ ಬಲ್ಲಾಳ್ ಉದಯವಾಣಿ ಮಾಧ್ಯಮಕ್ಕೆ ತಿಳಿಸಿದ್ದಾರೆಂದು ವರದಿಯಾಗಿದೆ.

 

ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಶಾಲಾ ಮಕ್ಕಳ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು ದ.ಕ ಬಸ್ ಮಾಲಕರ ಸಂಘ ಮತ್ತು ಕೆನರಾ ಬಸ್ ಮಾಲಕರ ಸಂಘದ ನಿರ್ಧಾರಕ್ಕೆ ಸಾರ್ವಜನಿಕರು ಖುಷಿ ವ್ಯಕ್ತಪಡಿಸಿದ್ದಾರೆ.