25 October 2025 | Join group

ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಪಾದಚಾರಿಗೆ ಗಂಭೀರ ಗಾಯ

  • 24 Sep 2025 01:56:30 PM

ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಪಾದಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಎಂಬಲ್ಲಿ ಬುಧವಾರ  ನಡೆದಿದೆ.

 

ಸಂಪ್ಯ ನಿವಾಸಿ ಅಬ್ದುಲ್ ರಹಿಮಾನ್ (ಪುತ್ತುಚ್ಚ ಸಂಪ್ಯ)(58) ಗಾಯಗೊಂಡವರು. 

 

ಅಬ್ದುಲ್ ರಹಿಮಾನ್ ಅವರು ಸಂಪ್ಯ ಮಸೀದಿಯ ಮುಂಭಾಗದಲ್ಲಿ ತನ್ನ ಸ್ಕೂಟರ್ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

 

ಗಾಯಾಳುವಿಗೆ ಸಂಪ್ಯದ ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.