01 February 2026 | Join group

ದ.ಕ.ಜಿಲ್ಲೆಯಲ್ಲಿ ಮೂರನೇ ದಿನವೂ ಸಮೀಕ್ಷೆಗೆ ಸಿಗದ ಸ್ಪಂದನ

  • 25 Sep 2025 11:51:42 AM

ಮಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ದ.ಕ.ಜಿಲ್ಲೆಯಲ್ಲಿ ಮೂರನೇ ದಿನವೂ ಸೂಕ್ತ ಸ್ಪಂದನ ಸಿಕ್ಕಿಲ್ಲ. ತಾಂತ್ರಿಕ ದೋಷ ಸಹಿತ ಮತ್ತಿತರ ಸಮಸ್ಯೆಗಳಿಂದಾಗಿ ಬುಧವಾರವೂ ನಿಗದಿತ ಗುರಿ ತಲುಪಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.

 

ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ತಾಲೂಕಿನಲ್ಲಿ ಮಂಗಳವಾರ ಗಣತಿಕಾರ್ಯ ಆರಂಭವಾಗಿತ್ತು. ಬುಧವಾರ ಮಂಗಳೂರು ದಕ್ಷಿಣ ಮತ್ತು ಉತ್ತರ ವಲಯದಲ್ಲೂ ಕಾರ್ಯ ಶುರುವಾಗಿದೆ. ಆದರೆ ಸರ್ವರ್ ಸಮಸ್ಯೆ, ಜಿಯೋ ಟ್ಯಾಗ್ ಹಾಗೂ ಆ್ಯಪ್ ಸಮಸ್ಯೆಯು ಬುಧವಾರವೂ ಬಾಧಿಸಿದೆ.

 

ಶಿಕ್ಷಣ ಇಲಾಖೆಯಲ್ಲದೆ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಪಂಚಾಯತ್‌ರಾಜ್ ಇಲಾಖೆ ಸಹಿತ ಬಹುತೇಕ ಇಲಾಖೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಅತಿಥಿ ಶಿಕ್ಷಕರು ಹಾಗೂ ಅಂಗನವಾಡಿ ಕೇಂದ್ರ ದಲ್ಲಿರುವ ಕಾರ್ಯಕರ್ತೆಯರ ಪೈಕಿ ಪದವಿ ಪೂರ್ಣಗೊಳಿಸಿದವರಿಂದಲೂ ಗಣತಿಕಾರ್ಯ ನಡೆಸಲಾಗುತ್ತಿದೆ.