20 June 2025 | Join group

ತಿರುಪತಿಯಲ್ಲಿ ಇನ್ನು ಮುಂದೆ ಹಿಂದೂಗಳು ಮಾತ್ರ ಕೆಲಸ ಮಾಡಬೇಕು : ಚಂದ್ರಬಾಬು ನಾಯ್ಡು ಆದೇಶ

  • 21 Mar 2025 07:39:40 PM

Tirupati : ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಇನ್ನು ಮುಂದೆ ಹಿಂದೂಗಳು ಮಾತ್ರ ಕೆಲಸ ಮಾಡಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿಕೆ ಕೊಟ್ಟಿದ್ದಾರೆ.

 

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ವಿಶ್ವದ ಅತ್ಯಂತ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ತಿರುಪತಿ ಪ್ರತಿ ದಿನ ಲಕ್ಷಾಂತರ ಭಕ್ತರು ಭೇಟಿ ನೀಡಿ ಶ್ರೀನಿವಾಸನ ದರ್ಶನ ಪಡೆಯುತ್ತಾರೆ.

 

ಚಂದ್ರಬಾಬು ನಾಯ್ಡು ತಿರುಪತಿಗೆ  ಕುಟುಂಬ ಸಮೇತ ಭೇಟಿ ನೀಡಿ ಆಡಳಿತ ಮಂಡಳಿ ಜೊತೆ ಸಭೆ ನಡೆಸಿ " ತಿರುಮಲ ದೇವಸ್ಥಾನದಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು, ಒಂದು ವೇಳೆ ಇತರ ಧರ್ಮದ ಜನ ಕೆಲಸ ಮಾಡುತ್ತಿದ್ದರೆ, ಅವರ ಭಾವನೆಗಳಿಗೆ ದಕ್ಕೆಯಾಗದಂತೆ ಗೌರವಯುತವಾಗಿ ಬೇರೆ ಕಡೆಗೆ ಸ್ಥಳಾಂತರಿಸಲಾಗುವುದು" ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

 

ಇದೇ ವೇಳೆ ಮಾತನಾಡಿ, ದೇಶದ ಪ್ರತಿ ರಾಜ್ಯದ ರಾಜಧಾನಿಗಳಲ್ಲಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಗಳನ್ನು ನಿರ್ಮಿಸುವ ಯೋಜನೆ ಇದೆ, ದೇವಸ್ಥಾನದ ನಿರ್ಮಾಣಕ್ಕೆ ಪ್ರತಿ ರಾಜ್ಯದ ಮುಖ್ಯಮಂತ್ರಿಗಳ ಸಹಕಾರ ಕೋರಿ ಪತ್ರ ಬರೆಯುವುದಾಗಿ ಚಂದ್ರಬಾಬು ನಾಯ್ಡು ತಿಳಿಸಿದರು. 

 

ಕೆಲ ತಿಂಗಳ ಹಿಂದೆ ತಿರುಪತಿ ಲಡ್ಡುವಿಗೆ ಕಲಬೆರಕೆ ಮತ್ತು ಪ್ರಾಣಿಯ ಕೊಬ್ಬಿನಂಶ ಇರುವ ಎಣ್ಣೆಯನ್ನು ಉಪಯೋಗಿಸಲಾಗುವುದು ಎನ್ನುವ ಆರೋಪದಡಿ ಹಿಂದಿನ ಮುಖ್ಯಮತ್ರಿ ವೈ ಎಸ್ ಜಗಮೋಹನ್ ರೆಡ್ಡಿ ವಿರುದ್ಧ ಆಡಳಿತ ಸರಕಾರ ಮುಗಿಬಿದ್ದಿತ್ತು.