01 February 2026 | Join group

ಉಳ್ಳಾಲ: ಸಮುದ್ರ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ

  • 27 Sep 2025 01:16:02 PM

ಉಳ್ಳಾಲ:  ಮೀನಿಗೆಂದು ಗಾಳ ಹಾಕುತ್ತಿದ್ದ ತಂಡವೊಂದಕ್ಕೆ ಕಲ್ಲುಗಳ ಮಧ್ಯೆ ಕೊಳೆತ ಮೃತದೇಹ ಸಿಲುಕಿರುವುದು ಗೋಚರಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಶಿವಾಜಿ ಜೀವರಾಕ್ಷಕ ಈಜುಗಾರರ ಸದಸ್ಯರಿಗೆ ಮಾಹಿತಿ ನೀಡಿದ್ದರು. ಉಳ್ಳಾಲ ಮೊಗವೀರಪಟ್ನ ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರು ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಹೆಗಲ ಮೇಲೆ ಇಟ್ಟುಕೊಂಡು 3-4 ಕಿ.ಮೀ ದೂರ ಎತ್ತಿಕೊಂಡು ಸಾಗಿ ಆಂಬುಲೆನ್ಸ್ ವಾಹನಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದು ಪೊಲೀಸರಿಗೆ ಸಹಕರಿಸಿದ್ದಾರೆ.