24 October 2025 | Join group

ರಾಜ್ಯ ಸರ್ಕಾರದಿಂದ ಅನರ್ಹ `BPL’ ಕಾರ್ಡ್ ದಾರರಿಗೆ ಶಾಕ್ : ನ್ಯಾಯಬೆಲೆ ಅಂಗಡಿಯ ಮುಂದೆ `ಕಾರ್ಡ್ ಡಿಲೀಟ್’ ನೋಟಿಸ್.!

  • 06 Oct 2025 11:51:57 AM

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಪಡಿತರ ಕಾರ್ಡ್ ದಾರರಿಗೆ ಸರ್ಕಾರ ಶಾಕ್ ನೀಡಿದೆ. ಉಚಿತವಾಗಿ ಪಡೆಯುತ್ತಿರುವ ಅನ್ನಭಾಗ್ಯ ಪಡಿತರ ಕಾರ್ಡ್ ಪರಿಷ್ಕರಣೆ ಮಾಡಿದೆ.

 

ರಾಜ್ಯ ಸರ್ಕಾರವು ಹಲವು ಕಡೆ ಪಡಿತರ ಕಾರ್ಡ್ ಡಿಲೀಟ್ ಮಾಡಲು ಮುಂದಾಗಿದೆ. ಡಿಲೀಟ್ ಮಾಡಿದ್ದು ಮಾತ್ರವಲ್ಲದೇ ನ್ಯಾಯಬೆಲೆ ಅಂಗಡಿಯಲ್ಲಿ ಡಿಲೀಟ್ ಮಾಡಲಾದ ವ್ಯಕ್ತಿಗಳ ಹೆಸರಿನಲ್ಲಿರುವ ಕಾರ್ಡ್ ವಿವರಗಳನ್ನು ನೋಟಿಸ್ ಬೋರ್ಡ್ನಲ್ಲಿ ಅಂಟಿಸಲಾಗಿದೆ.

 

ಇನ್ನು ನೋಟಿಸ್ ಬೋರ್ಡ್ನಲ್ಲಿ ಕೃಷಿ ಇತ್ಯಾದಿ ಆದಾಯಗಳಿಂದಾಗಿ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದೆ. ಹೀಗಾಗಿ ನಿಮ್ಮ ಪಡಿತರವನ್ನು ರದ್ದುಗೊಳಿಸಲು ಮುಂದಾಗಿದ್ದೇವೆ. ಈ ಬಾರಿ ಕೊನೆಯ ಬಾರಿಗೆ ಪಡಿತರ ನೀಡಲಾಗುತ್ತದೆ. ಮುಂದಿನ ತಿಂಗಳಿನಿಂದ ಪಡಿತರ ನೀಡಲಾಗುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.

 

ರೈತರು ತಮ್ಮ ಕೃಷಿ ಕೆಲಸಗಳಿಗಾಗಿ ಸಾಲಸೌಲಭ್ಯಕ್ಕಾಗಿ ಐಟಿ ಫೈಲಿಂಗ್ ನಂತಹ ಕೆಲಸ ಮಾಡಿದ್ದು ಇಂದು ರೇಷನ್ ಕಾರ್ಡ್ ರದ್ದತಿಗೆ ಪ್ರಮುಖ ಕಾರಣವಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಾಲ, ವಾಹನ ಖರೀದಿಗೆ ಸಾಲ ಪಡೆಯಲು ಸುಲಭವಾಗಿ ಕಂಡುಕೊಂಡ ವಿಧಾನ, ಬ್ಯಾಂಕ್ ಮಂದಿ ಸಾಲ ಕೊಡೋದಕ್ಕೆ ಹೇಳಿದ್ದು ಐಟಿ ಫೈಲಿಂಗ್ ಮಾಡಿ. ನಿಮಗೆ ಸುಲಭವಾಗಿ ಸಾಲ ಸಿಗುತ್ತದೆ ಅನ್ನೋದು.

 

ಈ ಮಾತನ್ನು ನಂಬಿದಂತ ಬಡ ರೈತ ಕುಟುಂಬದವರು 1, 2, 3ರಂತೆ ಲಕ್ಷಾಂತರ ವ್ಯವಹಾರ ನಡೆಸಿದ್ದಾಗಿ ಐಟಿ ಫೈಲಿಂಗ್ ಮಾಡಿದ್ದನ್ನು ಬ್ಯಾಂಕ್ ಗೆ ತೋರಿಸಿದ್ದಾರೆ. ಆ ಬಳಿಕ ಸಾಲ ಸೌಲಭ್ಯವನ್ನು ಪಡೆದಿದ್ದಾರೆ. ಇದೀಗ ಇಂತಹವರೆಲ್ಲರ ಮಾಹಿತಿಯನ್ನು ಪ್ಯಾನ್ ಸಂಖ್ಯೆ ಆಧಾರದ ಮೇಲೆ ಆದಾಯ ತೆರಿಗೆ ಇಲಾಖೆಯು ಪಟ್ಟಿ ಮಾಡಿ ಕೇಂದ್ರ ಸರ್ಕಾರಕ್ಕೆ ನೀಡಿತ್ತು. ಆ ಪಟ್ಟಿಯನ್ನು ರಾಜ್ಯ ಸರ್ಕಾರಕ್ಕೆ ನೀಡಿ, ನೋಡಿ ನೀವು ಎಷ್ಟು ಆದಾಯ ತೆರಿಗೆ ಪಾವತಿಯ ಕುಟುಂಬಸ್ಥರಿಗೆ ರೇಷನ್ ಕಾರ್ಡ್ ಕೊಟ್ಟಿದ್ದೀರಿ. ರದ್ದು ಮಾಡಿ ಎಂಬುದಾಗಿ ಸೂಚಿಸಿದೆ ಎನ್ನಲಾಗುತ್ತಿದೆ. ಹೀಗಾಗಿಯೇ ಇಂದು ರಾಜ್ಯಾಧ್ಯಂತ ಹಲವರ ಪಡಿತರ ಚೀಟಿಗಳು ರದ್ದುಗೊಂಡಿವೆ ಎಂಬುದಾಗಿ ಮೂಲಗಳ ಮಾಹಿತಿಯಾಗಿದೆ.