16 December 2025 | Join group

ರಾಜ್ಯದ ಪಡಿತರ ಚೀಟಿದಾರರಿಗೆ ಇನ್ಮುಂದೆ 5 ಕೆ.ಜಿ ಅಕ್ಕಿ ಬದಲು ಆಹಾರದ ಕಿಟ್ ವಿತರಿಸಲು ಸರ್ಕಾರ ನಿರ್ಧಾರ

  • 09 Oct 2025 07:18:19 PM

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

 

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಡಿತರ ಚೀಟಿದಾರರಿಗೆ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ತಿಂಗಳಿನಿಂದ ಜಾರಿಯಾಗುವ ಸಾಧ್ಯತೆಯಿದೆ.

 

ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀ ಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದೆ.