Mayanmar : ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 11.50 ರ ಸುಮಾರಿಗೆ ಭೂಮಿಯ 10 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದ ಪರಿಮಾಣವಾಗಿ ಮಯನ್ಮಾರ್ ದೇಶದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. 50 ಜನಕ್ಕೂ ಮೇಲು ಸಾವು, 250ಕ್ಕಿಂತ ಹೆಚ್ಚು ಜನರಿಗೆ ಗಾಯ.
ಭಾರಿ ಪ್ರಮಾಣದ ಪ್ರಾಣ ಹಾನಿ, ಬ್ಯಾಂಕಾಕ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಬ್ಯಾಂಕಾಕ್ನಲ್ಲಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಕಟ್ಟಡ ಕುಸಿದು 43 ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದಾರೆ. ಮಯನ್ಮಾರ್ ರಾಜಧಾನಿಯಲ್ಲಿರುವ ಪ್ರಮುಖ ಆಸ್ಪತ್ರೆಯಲ್ಲಿ ಭಾರೀ ಸಂಖ್ಯೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಹಲವಾರು ಕಟ್ಟಡಗಳು ಕೆಳಗೆ ಬಿದಿದ್ದು, ಒಟ್ಟು ಪ್ರಾಣ ಹಾನಿ ಮತ್ತು ಇನ್ನಿತರ ವಿವರಣೆಗಳು ಇನ್ನಷ್ಟೇ ಬರಬೇಕಾಗಿದೆ. ಥೈಲ್ಯಾಂಡ್ನ ಸ್ಟಾಕ್ ಎಕ್ಸ್ಚೇಂಜ್ ತನ್ನ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಮಯನ್ಮಾರ್ ನಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದ ನಂತರ ಬ್ಯಾಂಕಾಕ್ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಭಾರತದಲ್ಲೂ ಕಂಪನ
ದೇಶದ ರಾಜಧಾನಿ ದೆಹಲಿಯಲ್ಲೂ ಮಯನ್ಮಾರ್ ಭೂಕಂಪದದ ಪರಿಣಾಮ ಭೂಮಿ ಅಲುಗಾಡಿದೆ ಎಂದು ತಿಳಿದು ಬಂದಿದೆ. ಕೋಲ್ಕತ್ತಾ, ಇಂಫಾಲ, ಮೇಘಾಲಯದಲ್ಲೂ ಭೂಕಂಪದ ಅನುಭವವಾಗಿದೆ.
ಭಾರತದಿಂದ ನೆರವು ಘೋಷಣೆ
ಮಯನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿನ ಭೂಕಂಪ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸುತ್ತೇನೆ. ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಭಾರತ ಸಿದ್ಧವಾಗಿದೆ. ಎಲ್ಲರ ಸುರಕ್ಷತೆ ಮತ್ತು ಯೋಗ ಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಈ ನಿಟ್ಟಿನಲ್ಲಿ, ನಮ್ಮ ಅಧಿಕಾರಿಗಳು ಸನ್ನದ್ಧರಾಗಿರಲು ಸೂಚಿಸಿದ್ದೇನೆ. ಮಯನ್ಮಾರ್ ಮತ್ತು ಥೈಲ್ಯಾಂಡ್ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿರಲು ಸೂಚಿಸಿದ್ದೇನೆ" ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಅಕೌಂಟ್ ನಲ್ಲಿ ಟ್ವೀಟ್ ಮಾಡಿ ತಿಳಿಸಿದ್ದಾರೆ.