ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯದ ವೇಳೆ ಪಕ್ಕೆಲುಬಿನ ಗಾಯದಿಂದ ಬಳಲುತ್ತಿರುವ ಭಾರತದ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ.
ಅಲೆಕ್ಸ್ ಕ್ಯಾರಿಯನ್ನು ಔಟ್ ಮಾಡಲು ಬ್ಯಾಕ್ವರ್ಡ್ ಪಾಯಿಂಟ್ನಿಂದ ಹಿಂದಕ್ಕೆ ಓಡುವ ಅದ್ಭುತ ಕ್ಯಾಚ್ ಪಡೆದಿದ್ದ ಅಯ್ಯರ್, ಈ ಪ್ರಕ್ರಿಯೆಯಲ್ಲಿ ಅವರ ಎಡ ಪಕ್ಕೆಲುಬಿಗೆ ಗಾಯವಾಗಿರುವಂತೆ ಕಂಡುಬಂದಿದ್ದು, ಶನಿವಾರ ಡ್ರೆಸ್ಸಿಂಗ್ ಕೋಣೆಗೆ ಹಿಂತಿರುಗಿದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಶ್ರೇಯಸ್ ಕಳೆದ ಎರಡು ದಿನಗಳಿಂದ ಐಸಿಯುನಲ್ಲಿದ್ದಾರೆ. ವರದಿಗಳು ಬಂದ ನಂತರ, ಆಂತರಿಕ ರಕ್ತಸ್ರಾವ ಪತ್ತೆಯಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಬೇಕಾಯಿತು ಎಂದಿದ್ದಾರೆ.





